Friday, October 17, 2008

Poem

This is one of the poem's that I like. It is from the famous kannada T.V. serial named "Muktha" by T.N. Seetharam. Hope you all will enjoy :) (Those who do not know kannada language, please excuse!)

ಕಾರುಮೋಡ ಮಳೆಯಾಗಿ ಸುರಿದಾಗ ಕಣ್ಣ ಹನಿಗೆ ಮುಕ್ತಿ
ಮರದ ಹಕ್ಕಿ ಮರಿ ರೆಕ್ಕೆ ಬೀಸಿದರೆ ಅದರ ಗರಿಗೆ ಮುಕ್ತಿ |
ಎದೆಯ ನೋವು ಹಾಡಾಗಿ ಹೊಮ್ಮಿದರೆ ಭಾವಕ್ಕೆ ಬಂಧ ಮುಕ್ತಿ
ಎಂದು ಆದೇವು ನಾವು ಮುಕ್ತ ಮುಕ್ತ ಮುಕ್ತ ||

ಮೊಗ್ಗಿನಿಂದ ಸೆರೆ ಒಡೆದ ಗಂಧ ಹೂವಿಂದ ದೂರ ದೂರ
ಎಲ್ಲುಂಟು ಆಚೆ ತೀರ |
ಮೊಗ್ಗಿನಿಂದ ಸೆರೆ ಒಡೆದ ಗಂಧ ಹೂವಿಂದ ದೂರ ದೂರ
ಎಲ್ಲುಂಟು ಆಚೆ ತೀರ ||

ಏರು ನದಿಗೆ ಇದಿರಾಗಿ ಈಜಿ ದಡ ಸೇರಬಹುದೆ ಜೀವಾ
ದಾಟಿ ಈ ಪ್ರವಾಹ |
ತಾನು ನೊಂದು ತಿಳಿ ಬೆಳಕ ಬೀರುತಿದೆ ಒಂದು ಇರುಳ ದೀಪ
ನಿಶ್ಚಲದ ಮೂರ್ತ ರೂಪ ||

ದೂರದಿಂದಲೆ ಜೀವ ಹಿಂಡುತಿದೆ ಕಾಣದೊಂದು ಹಸ್ತ
ಆದೇವೆ ಬಂಧ ಮುಕ್ತ |
ದೂರದಿಂದಲೆ ಜೀವ ಹಿಂಡುತಿದೆ ಕಾಣದೊಂದು ಹಸ್ತ
ಆದೇನೆ ಬಂಧ ಮುಕ್ತ ||

No comments:

Post a Comment